Breaking News

ಕೈ ಶಾಸಕರ ಮಾರಾಮಾರಿ ಕೇಸ್..!

ಕಂಪ್ಲಿ ಶಾಸಕ ಗಣೇಶ್ ವಿರುದ್ಧ FIR

SHARE......LIKE......COMMENT......

ಬೆಂಗಳೂರು:

ಈಗಲ್ಟನ್ ರೆಸಾರ್ಟ್​ನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದ ಕೇಸ್ ನಲ್ಲಿ ಕಂಪ್ಲಿ ಶಾಸಕ ಜೆಎನ್ ಗಣೇಶ್ ಅವರನ್ನು ಕಾಂಗ್ರೆಸ್ ನಿಂದ ಅಮಾನತುಗೊಳಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಗಣೇಶ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿರುವುದಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರಕರಣದ ತನಿಖೆಗೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ನೇತೃತ್ವದಲ್ಲಿ ವಿಶೇಷ ತನಿಖಾ ಸಮಿತಿ ರಚಿಸಲಾಗಿದೆ ಸಚಿವರಾದ ಕೆ.ಜೆ. ಜಾರ್ಜ್ ಮತ್ತು ಕೃಷ್ಣ ಭೈರೇಗೌಡ ಅವರ ತನಿಖಾ ಸಮಿತಿಯ ಸದಸ್ಯರಾಗಿದ್ದು, ಶೀಘ್ರದಲ್ಲೇ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ….

ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆನಂದ್ ಸಿಂಗ್ ಅವರ ಹೇಳಿಕೆ ಆಧರಿಸಿ ಬಿಡದಿ ಠಾಣೆ ಪೊಲೀಸರು ಕಂಪ್ಲಿ ಗಣೇಶ್ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ….