Breaking News

ಮಾಜಿ ಮೇಯರ್​ ಕೊಲೆ ಆರೋಪಿ ಮೇಲೆ ಫೈರಿಂಗ್​..!

ಕುತ್ತಿಗೆ ಬಿಗಿದು ಎಸ್ಕೇಪ್​ ಯತ್ನ....

SHARE......LIKE......COMMENT......

ತುಮಕೂರು:

ಮಹಾನಗರ ಪಾಲಿಕೆ ಮಾಜಿ ಮೇಯರ್ ರವಿಕುಮಾರ್ ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿಯ ಮೇಲೆ ಇಂದು ನಸುಕಿನ ಜಾವ ಪೊಲೀಸರು ಗುಂಡು ಹಾರಿಸಿದ್ದಾರೆ. ಪ್ರಕರಣದ ಎರಡನೇ ಆರೋಪಿ ಮಧುಗಿರಿಯ ಮಲ್ಲೇಶ್ ಎಂಬಾತನ ಮೇಲೆ ಪೊಲೀಸರು ಫೈರಿಂಗ್​ ಮಾಡಿದ್ದಾರೆ. ನಿನ್ನೆರಾತ್ರಿ ಮಲ್ಲೇಶ್​ನನ್ನು ಕ್ಯಾತಸಂದ್ರ ಪೊಲೀಸರು ಬಂಧಿಸಿದ್ದರು.

ಠಾಣೆಗೆ ಕರೆತರುವ ವೇಳೆ ಪೊಲೀಸರ ಮೇಲೆ ಹಲ್ಲೆಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮಧುಗಿರಿ ಮಲ್ಲೇಶನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವ ಮಲ್ಲೇಶ್​ಗೆ  ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಆರೋಪಿ ಮಲ್ಲೇಶ್​ ತಪ್ಪಿಸಿಕೊಳ್ಳುವ ವೇಳೆ ಕೈಗೆ ಹಾಕಿದ್ದ ಚೈನ್​ನಿಂದ ಮುಖ್ಯ ಪೇದೆ ಸೈಮನ್ ವಿಕ್ಟರ್ ಕುತ್ತಿಗೆಗೆ ಬಿಗಿದಿದ್ದ ಎನ್ನಲಾಗಿದೆ. ನೋವಿನಿಂದ ಬಳಲುತ್ತಿರುವ ಪೇದೆಯನ್ನ ಚಿಕಿತ್ಸೆಗಾಗಿ ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಎಸ್​ಪಿ ದಿವ್ಯಾಗೋಪಿನಾಥ್ ಭೇಟಿ ನೀಡಿ ಪರಿಶೀಲಿಸಿದರು. ಒಟ್ಟಾರೆ ರವಿಕುಮಾರ್ ಹತ್ಯೆ ಪ್ರಕರಣದಲ್ಲಿ ಈವರೆಗೆ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದಂತಾಗಿದೆ…….