Breaking News

ಕೈ-ತೆನೆ ಮೈತ್ರಿ ಅಭ್ಯರ್ಥಿಯಾಗಿ ಡಿ.ಕೆ ಸುರೇಶ್ ಅಖಾಡಕ್ಕೆ….

ರಾಮನಗರ ಡಿಸಿ ಕಚೇರಿಯಲ್ಲಿ ಉಮೇದುವಾರಿಕೆ....

SHARE......LIKE......COMMENT......

ಬೆಂಗಳೂರು:

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಹಾಲಿ ಸಂಸದ ಡಿ.ಕೆ.ಸುರೇಶ್ ಇಂದು ಉಮೇದುವಾರಿಕೆ ಸಲ್ಲಿಸಿದ್ದರು ,ನಾಮಪತ್ರಕ್ಕೂ ಮುನ್ನ ಕೆಂಕೆರೆಯಲ್ಲಿರೋ ಕೆಂಕೇರಮ್ಮ ದೇಗುಲಕ್ಕೆ ತೆರಳಿ ಸುರೇಶ್​ ಬಿ ಫಾರಂ ಇಟ್ಟು ಪೂಜೆ ಸಲ್ಲಿಸಿದರು. ನಂತರ ರಾಮನಗರದ ಜೂನಿಯರ್ ಕಾಲೇಜು ಮೈದಾನದಿಂದ ಮೆರವಣಿಗೆ ಮೂಲಕ ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಕೆ ಮಾಡಿದ್ದರು. ಡಿ.ಕೆ.ಸುರೇಶ್​ಗೆ, ಸಿಎಂ ಕುಮಾರಸ್ವಾಮಿ ಸಚಿವ ಡಿ.ಕೆ.ಶಿವಕುಮಾರ್, ಶಾಸಕಿ ಅನಿತಾ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಿದ್ದರು ಜೊತೆಗೆ ಪಕ್ಷದ ಕಾರ್ಯಕರ್ತರು, ಮುಖಂಡರು ಮತ್ತು ಸಾವಿರಾರು ಅಭಿಮಾನಿಗಳು ಸಾಥ್ ಕೊಟ್ಟಿದ್ದಾರೆ……