Breaking News

ಡಿಕೆಶಿ ಪರ ನಿಂತ ಯಡಿಯೂರಪ್ಪ ..!

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರಕ್ಕೆ ಕ್ಷಮೆ.....

SHARE......LIKE......COMMENT......

ಬೆಂಗಳೂರು:

ಪ್ರತ್ಯೇತ ಲಿಂಗಾಯತ ಸ್ವತಂತ್ರ ಧರ್ಮದ ವಿಚಾರಕ್ಕೆ ನಾವು ಕೈ ಹಾಕಬಾರದಿತ್ತು ಎಂಬ ಡಿ.ಕೆ ಶಿ ಅವರ ಹೇಳಿಕೆ ಬಗ್ಗೆ ಟೀಕೆ,ಸರಿಯಲ್ಲ ಎಂದು  ಯಡಿಯೂರಪ್ಪ ಹೇಳಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಡಿ.ಕೆ.ಶಿ ತಮ್ಮ ಸ್ವಂತ ಅಭಿಪ್ರಾಯ ಹೇಳಿದ್ದಾರೆ.  ಈ ಹೇಳಿಕೆ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ, ಈ ಹೇಳಿಕೆಯನ್ನು ಎಲ್ಲರೂ ಸ್ವಾಗತಿಸಬೇಕು. ಅವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಇದರಲ್ಲಿ ನನಗೆ ಯಾವುದೇ ರಾಜಕಾರಣ ಕಾಣುತ್ತಿಲ್ಲ ಎಂದು ಡಿಕೆಶಿ ಪರ ಯಡಿಯೂರಪ್ಪ ಬ್ಯಾಟಿಂಗ್ ಮಾಡಿದ್ದಾರೆ.

ಯಡಿಯೂರಪ್ಪ ಅವರು ಸಚಿವ ಡಿ.ಕೆ ಶಿವಕುಮಾರ್​ ಅವರ ವಿಚಾರದಲ್ಲಿ ಯಾವುದೇ ಟೀಕೆಗೆ ಮಾಡದೆ, ಮೃಧು ಧೋರಣೆ ಅನುಸರಿಸಿದ್ದು, ಇದರ ಹಿಂದೆ ರಾಜಕೀಯ ಕಾರಣಗಳೂ ಇವೆ ಎನ್ನಲಾಗಿದೆ. ಡಿ.ಕೆ ಶಿವಕುಮಾರ್ ಪರ ಯಡಿಯೂರಪ್ಪ ಅವರ ಈ ಮೃಧುತ್ವದ ಧೋರಣೆ ಹಲವು ಕುತೂಹಲಗಳಿಗೆ ಎಡೆ ಮಾಡಿದೆ……