Breaking News

ನಾಳೆ, ನಾಡಿದ್ದು ಭಾರತ್​​ ಬಂದ್..!​​

ವಿವಿಧ ಕಾರ್ಮಿಕ ಸಂಘಟನೆಗಳ ಒಕ್ಕೂಟ ಬಂದ್​ಗೆ ಕರೆ.....

SHARE......LIKE......COMMENT......

ಬೆಂಗಳೂರು:

ನಾಳೆ, ನಾಡಿದ್ದು ಭಾರತ್​​ ಬಂದ್ ಬಿಸಿ ತಟ್ಟಲಿದೆ. ವಿವಿಧ ಕಾರ್ಮಿಕ ಸಂಘಟನೆಗಳ ಒಕ್ಕೂಟ ಬಂದ್​ಗೆ ಕರೆ ನೀಡಿವೆ. ಮೋಟಾರು ವಾಹನ ಕಾಯ್ದೆ ತಿದ್ದುಪಡಿಗೆ ವಿರೋಧ, ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆ ಜಾರಿ ಸೇರಿದಂತೆ 12 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಂದ್​ಗೆ ಕರೆ ನೀಡಲಾಗಿದೆ. ಎಐಟಿಯುಸಿ, ಸಿಐಟಿಯು, ಐಎನ್‍ಟಿಯುಸಿ, ಎಲ್‍ಪಿಎಫ್ ಕಾರ್ಮಿಕ ಸಂಘಟನೆಗಳು ಈ ಬಂದ್​ಗೆ ಕರೆ ನೀಡಿವೆ.

ಬಂದ್​ಗೆ  ಬಿಎಂಟಿಸಿ ಹಾಗೂ ಕೆಎಸ್‍ಆರ್​ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳು ಬಂದ್​ಗೆ ಬೆಂಬಲ ಸೂಚಿಸಿದೆ.ಆಟೋ, ಓಲಾ ಮತ್ತು ಉಬರ್ ಕ್ಯಾಬ್‍  ಬ್ಯಾಂಕ್ ನೌಕರರೂ ಸಾಥ್​ ನೀಡ್ತಿದ್ದು, ಬ್ಯಾಂಕ್ ಸೇವೆಯಲ್ಲೂ ವ್ಯತ್ಯಯವಾಗುವ ಸಾಧ್ಯತೆಯಿದೆ. ಶಾಲೆ-ಕಾಲೇಜುಗಳಿಗೆ ಆಯಾ ಜಿಲ್ಲೆಗಳ ಪರಿಸ್ಥಿತಿ ನೋಡಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ….