Breaking News

ನಿಜಾಮುದ್ದೀನ್ ಎಕ್ಸ್​​ಪ್ರೆಸ್​ನಲ್ಲಿ ಬೆಂಕಿ ಅವಘಡ..!

ಮಹಿಳೆಯ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ......

SHARE......LIKE......COMMENT......

ಉಡುಪಿ:

ಮುಂಬೈನಿಂದ ಎರ್ನಾಕುಲಂಗೆ ಸಂಚರಿಸುತ್ತಿದ್ದ ನಿಜಾಮುದ್ದೀನ್ ಎಕ್ಸ್​​ಪ್ರೆಸ್​ ರೈಲು ಉಡುಪಿ ಜಿಲ್ಲೆ ಬೈಂದೂರು ರೈಲ್ವೇ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಕಂಬದಕೋಣೆ ಬಳಿ ಚಲಿಸುತ್ತಿದ್ದ  ವೇಳೆ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಳೆದ ರಾತ್ರಿ 1.30ರ ಸುಮಾರಿಗೆ ರೈಲಿನ ಎಸಿ ಕೋಚ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕುಂದಾಪುರ ನಿಲ್ದಾಣದಲ್ಲಿ ರೈಲಿನಿಂದ ಇಳಿದ ಮಹಿಳೆಯೊಬ್ಬರು ಕೂಡಲೇ ಬೆಂಕಿ ಹೊತ್ತಿರುವುದನ್ನ ರೈಲ್ವೆ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ಎಚ್ಚೆತ್ತ ಸಿಬ್ಬಂದಿ ರೈಲನ್ನ ನಿಲ್ಲಿಸಿದ್ದಾರೆ. ಎಸಿ ಬೋಗಿಯಲ್ಲಿ ಶಾಟ್ ಸರ್ಕ್ಯೂಟ್ ನಿಂದ ಈ ಬೆಂಕಿ ಅವಘಢ ಸಂಭವಿಸಿದೆ ಎನ್ನಲಾಗಿದ್ದು, ಬೆಂಕಿ ಹತ್ತಿದ ಬೋಗಿಯನ್ನು ಪ್ರತ್ಯೇಕಿಸಿ, ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲಾಗಿದೆ……