Breaking News

ಪುಲ್ವಾಮಾ ಉಗ್ರ ದಾಳಿಯ ಸುಳಿವು ಮೊದಲೇ ಸಿಕ್ಕಿತ್ತು ..!?

ಭದ್ರತಾ ವೈಫಲ್ಯ ಆಗಿಲ್ಲ... ಆದರೆ ತಪ್ಪಾಗಿದ್ದೆಲ್ಲಿ..?

SHARE......LIKE......COMMENT......

ನವದೆಹಲಿ:

ಭಾರತೀಯ ಸೇನೆಯ ಮೇಲೆ ಭಾರಿ ಪ್ರಮಾಣದಲ್ಲಿ ದಾಳಿ ನಡೆಸಲು ಜೈಷೆ ಮೊಹಮ್ಮದ್ ಉಗ್ರ ಸಂಘಟನೆಯು ವರ್ಷದ ಹಿಂದೆಯೇ ಪ್ಲಾನ್ ಮಾಡಿತ್ತು. ಎರಡು ದಿನಗಳ ಹಿಂದೆಯಷ್ಟೇ ಭಾರತದ ಗುಪ್ತಚರರಿಗೆ ಈ ಪ್ಲಾನ್ ಬಗ್ಗೆ ಮಾಹಿತಿ ಸಿಕ್ಕಿತ್ತು ಆದರೆ ಯೋಧರ ಸಾವನ್ನು ತಪ್ಪಿಸಲು ಸಾಧ್ಯವಾಗಿಲ್ಲ…..

ಉಗ್ರ ದಾಳಿಗೆ ನಾಗರಿಕ ವಾಹನ ಬಳಸಿದ್ದರಿಂದ ಇಂತಾ ಭೀಕರ ದಾಳಿ ನಡೆದಿದೆ. . ಸೇನೆ ಸಹ ಭದ್ರತಾ ತಪಾಸಣೆ, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿತ್ತು. ಆದರೆ ಸ್ಥಳೀಯ ಜನರಿಗೆ ಹೆದ್ದಾರಿ ಬಳಸಲು ನೀಡಲಾಗಿದ್ದ ಮುಕ್ತ ಅವಕಾಶವನ್ನು ಉಗ್ರಗಾಮಿಯೂ ತನ್ನ ಕೃತ್ಯಕ್ಕೆ ದುರ್ಬಳಕೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಾಣುತ್ತದೆ. ದಾಳಿಯ ಸಂದರ್ಭದಲ್ಲಿ 78 ವಾಹನಗಳಲ್ಲಿ ಒಟ್ಟು 2,547 ಯೋಧರು ಎರಡು ಭಾಗಗಳಾಗಿ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಸಾಗುತ್ತಿದ್ದರು. ಕಳೆದ 6 ದಿನಗಳಿಂದ ಈ ಹೆದ್ದಾರಿ ಬಂದ್ ಆಗಿದ್ದರಿಂದ ನಿನ್ನೆ ಮಾಮೂಲಿಗಿಂತ ಹೆಚ್ಚು ಸೈನಿಕರು ಆ ಮಾರ್ಗದಲ್ಲಿ ಹೋಗುತ್ತಿದ್ದರು. ಇದೇ ಸಮಯಕ್ಕೆ ಕಾಯುತ್ತಿದ್ದ ಉಗ್ರರಿಗೆ ಇನ್ನೂ ಹೆಚ್ಚು ಮಂದಿಯನ್ನು ಕೊಲ್ಲುವ ಗುರಿ ಇತ್ತು. ಆದರೆ ಯೋಧರ ಒಂದು ಬಸ್ ಮಾತ್ರ ದಾಳಿಗೆ ತುತ್ತಾಗಿದೆ.

ದಾಳಿಯ ಮುನ್ಸೂಚನೆ ಇದ್ದರಿಂದ ಟ್ರಕ್ ಸಾಗುವ ಮಾರ್ಗವನ್ನು ಸಂಪೂರ್ಣವಾಗಿ ತಪಾಸಣೆ ಮಾಡಲಾಗಿತ್ತು. ಅಲ್ಲಿ ಯಾವುದೇ ಐಇಡಿ ಸ್ಫೋಟಕಗಳು ಪತ್ತೆಯಾಗಲಿಲ್ಲ. ಗುಂಡು ಅಥವಾ ಗ್ರೆನೇಡ್ ದಾಳಿ ಆಗುವ ಯಾವುದೇ ಅಪಾಯವೂ ಕಾಣಲಿಲ್ಲ. ಆದರೆ ಹೆದ್ದಾರಿಗೆ ಕೂಡಿಕೊಳ್ಳುವ ಅಡ್ಡ ರಸ್ತೆಯಿಂದ ಬಂದ ವಾಹನವು ಈ ದುರಂತಕ್ಕೆ ಕಾರಣವಾಗಿರುವುದು ಸದ್ಯಕ್ಕೆ ತಿಳಿದುಬಂದ ಮಾಹಿತಿ ಜಮ್ಮು ಕಾಶ್ಮೀರದ ಸ್ಥಳೀಯರಿಗೆ ಹೆದ್ದಾರಿ ಬಳಸುವ ಅವಕಾಶ ನೀಡಿದ್ದು ದೊಡ್ಡ ತಪ್ಪಾಗಿದ್ದು, ಆತ್ಮಾಹುತಿ ದಾಳಿಕೋರನು ಸ್ಥಳೀಯ ಗ್ರಾಮಸ್ಥರು ಸಂಚರಿಸುವ ಸರ್ವಿಸ್ ರೋಡ್ ಮುಖಾಂತರ ತನ್ನ ವಾಹನವನ್ನು ಚಲಾಯಿಸಿಕೊಂಡು ಬಂದು ಯೋಧರ ಕಾನ್ವಾಯ್ ನತ್ತ ನುಗ್ಗಿಸಿರುವ ಸಾಧ್ಯತೆ ಇದೆ ಎಂದು ಖಾಸಗಿ ಪೇಪರ್ ರಿಪೋರ್ಟ್ ಮಾಡಿದೆ…..