Breaking News

ಅರಮನೆ ಅಂಗಳದಲ್ಲಿ ಜಂಬೂ ಸವಾರಿ ರಿಹರ್ಸಲ್..!

ಜಂಬೂಸವಾರಿಗೆ ತಯಾರಾದ ಗಜಪಡೆ....

SHARE......LIKE......COMMENT......

ಮೈಸೂರು:

ವಿಶ್ವವಿಖ್ಯಾತ ಮೈಸೂರು ದಸರಾ ಆಕರ್ಷಣೆಯ ಕೇಂದ್ರಬಿಂದುವಾಗಿರುವ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆ ಹಾಗೂ ಅಶ್ವಾರೋಹಿ ದಳಕ್ಕೆ ಪೊಲೀಸ್ ಬ್ಯಾಂಡ್ ಸಮೇತ ಅರಮನೆ ಅಂಗಳದಲ್ಲಿ ತಾಲೀಮು ನಡೆಸಲಾಯಿತ್ತು. ಜಂಬೂ ಸವಾರಿಗೆ ಇನ್ನು ನಾಲ್ಕು ದಿನವಷ್ಟೇ ಬಾಕಿ ಇದ್ದು, ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆ, ಅಶ್ವರೋಹಿ ಪಡೆಗೆ ಇಂದು ತಾಲೀಮು ನಡೆಸಲಾಗುತ್ತಿದೆ. ಈ ಮಧ್ಯೆ ಇಂದು ಅರಮನೆ ಆವರಣದಲ್ಲಿ ಜಂಬೂ ಸವಾರಿ ತಾಲೀಮು ವೇಳೆ ವಿಚಲಿತಕೊಂಡ ಕುದುರೆ ಹಿಮ್ಮುಖವಾಗಿ ಚಲಿಸಿದ್ದು ಅಶ್ವಾರೋಹಿಗಳಾದ ಪೊಲೀಸ್ ಸಿಬ್ಬಂದಿಗಳು ಕೆಲವರು ಕೆಳಗೆ ಬಿದ್ದ ಘಟನೆಯೂ ನಡೆಯಿತು. ಅಶ್ವಾರೋಹಿ ಪಡೆಯ ಕೆಲವು ಅಶ್ವಗಳು ಗಜಪಡೆ ಕಂಡು ಗಾಬರಿಗೊಂಡಿವೆ. ಮೊದಲ ದಿನ ಜಂಬೂ ಸವಾರಿ ರಿಹರ್ಸಲ್ ನಲ್ಲಿ ಗಜಪಡೆಯೊಂದಿಗೆ ಅಶ್ವಾರೋಹಿ ಪಡೆಯೂ ಭಾಗಿಯಾಗಿತ್ತು. ಆದರೂ ಇಂದು ವಿಚಲಿತಗೊಂಡಿದೆ. ಇನ್ನೆರಡು ದಿನ ತಾಲೀಮು ನಡೆಸಲಾಗುತ್ತಿದ್ದು, ಸರಿ ಹೋಗಬಹುದು ಎಂದು ಪೊಲೀಸರು ಹೇಳಿದ್ದಾರೆ.

ಅ.26ರಂದು ಜಂಬೂಸವಾರಿ ಮೆರವಣಿಗೆ ಹೊರಡುವ ಮುನ್ನ ರಾಷ್ಟ್ರಗೀತೆ ಮೊಳಗಲಿದ್ದು, ಆ ವೇಳೆ 21 ಸುತ್ತು ಕುಶಾಲತೋಪು ಸಿಡಿಸಲಾಗುವುದು. ಜಂಬೂಸವಾರಿ ವೇಳೆ ಕುಶಾಲತೋಪಿನ ಶಬ್ದಕ್ಕೆ ಆನೆಗಳು, ಕುದುರೆಗಳು ವಿಚಲಿತವಾಗದೆ ಇರಲಿ ಎಂಬ ಕಾರಣಕ್ಕೆ ಪ್ರತಿ ವರ್ಷ ಒಟ್ಟು ಮೂರು ಬಾರಿ ತಾಲೀಮು ನಡೆಸಲಾಗುತ್ತದೆ. ಕಳೆದ ವರ್ಷ ತಾಲೀಮು ಸಂದರ್ಭ ಕುಶಾಲತೋಪು ಸಿಡಿಸುವ ವೇಳೆ ಬರುವ ಭಾರೀ ಶಬ್ದಕ್ಕೆ ಸಾಕಷ್ಟು ಆನೆಗಳು ಬೆಚ್ಚಿದ್ದವು. ಕೊನೆ ಕೊನೆಗೆ ಶಬ್ದಕ್ಕೆ ಹೊಂದಿಕೊಂಡಿದ್ದವು. ಈ ಬಾರಿ ಕೂಡ ಯಾವುದೇ ಆನೆಗಳು ಶಬ್ದಕ್ಕೆ ಬೆಚ್ಚದೆ ಜಂಬೂಸವಾರಿಗೆ ನಾವು ತಯಾರಾಗಿದ್ದೇವೆ ಎಂಬ ಸಂದೇಶವನ್ನು ಸಾರಿವೆ.
ಅರಮನೆ ಆವರಣದಲ್ಲಿ ತಾಲೀಮುನಡೆದಿದ್ದು, ತಂಡಗಳು ಜಂಬೂ ಸವಾರಿ ದಿನ ನಡೆಯುವ ಪ್ರಕ್ರಿಯೆಗಳ ರಿಹರ್ಸಲ್ ನಡೆಸಿವೆ. ಪೊಲೀಸ್ ಬ್ಯಾಂಡ್ ಗಳಿಂದಲೂ ರಿಹರ್ಸಲ್ ನಡೆದಿದ್ದು, ತಾಲೀಮಿನ ವೇಳೆ ಅಶ್ವಗಳು ವಿಚಲಿತಗೊಂಡಿವೆ.

ಜಂಬೂಸವಾರಿಗೆ ಕೊರೋನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಈ ಬಾರಿ ಅರಮನೆ ಆವರಣದೊಳಗೆ ಮಾತ್ರ ಜಂಬೂ ಸವಾರಿ ನಡೆಯಲಿದೆ. ಇಂದಿನಿಂದ ಜಂಬೂ ಸವಾರಿ ರಿಹರ್ಸಲ್ ಪ್ರಾರಂಭವಾಗಿದ್ದು, ಗಜಪಡೆ, ಅಶ್ವಾರೋಹಿದಳ, ಶಸ್ತ್ರ ಸಜ್ಜಿತ ಪೊಲೀಸ್‍ರು ಏಕ ಕಾಲದಲ್ಲಿ ತಾಲೀಮು ನಡೆಸಿದರು……