Breaking News

ಭಾನುವಾರ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ..!

ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ....

SHARE......LIKE......COMMENT......

ಬೆಂಗಳೂರು:

ಜಿಮ್​ನಲ್ಲಿ ವರ್ಕೌಟ್ ಮಾಡಿದ ಬಳಿಕ ಹೃದಯಾಘಾತದಿಂದಾಗಿ ವಿಧಿವಶರಾಗಿರುವ ಪುನೀತ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಇಡೀ ದಿನ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಪುನೀತ್ ಅವರ ಅಭಿಮಾನಿಗಳು ಈ ದುಃಖಕರ ಸನ್ನಿವೇಶದಲ್ಲಿ ಭಾವಾವೇಶಕ್ಕೆ ಒಳಗಾಗಿ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬಾರದು. ಶಾಂತಿ, ಸಂಯಮದಿಂದ ವರ್ತಿಸಿ ಅಂತಿಮ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಪುನೀತ್ ರಾಜ್​ಕುಮಾರ್​ಗೆ ಸಕಲ ಸರ್ಕಾರಿ​ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಅವರ ತಂದೆ-ತಾಯಿಯಾದ ಡಾ. ರಾಜ್ ಕುಮಾರ್ ಹಾಗೂ, ಪಾರ್ವತಮ್ಮನವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು.

ಈ ಮೊದಲು ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಬಳಿಯ ಪುನೀತ್ ಫಾರ್ಮ್​ಹೌಸ್​ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿತ್ತು. ಪುನೀತ್ ರಾಜ್​ಕುಮಾರ್ ಈ ಜಾಗದಲ್ಲಿ ಡಾ. ರಾಜಕುಮಾರ್ ಶಾಲೆ ಆರಂಭಿಸಬೇಕೆಂಬ ಕನಸು ಕಂಡಿದ್ದರು. ಆದರೆ, ಈ ಫಾರ್ಮ್​ಹೌಸಿನ ಬದಲು ಕಂಠೀರವ ಸ್ಟುಡಿಯೋದಲ್ಲೇ ಪುನೀತ್ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ ಅಪ್ಪ-ಅಮ್ಮನ ಸಮಾಧಿ ಪಕ್ಕದಲ್ಲೇ ದೊಡ್ಮನೆಯ ಪ್ರೀತಿಯ ಅಪ್ಪು ಪಂಚಭೂತಗಳಲ್ಲಿ ಲೀನವಾಗಲಿದ್ದಾರೆ……