Breaking News

ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ 25 ಕೋಟಿ ಲಂಚ ಆರೋಪ..!

ಸಮೀರ್ ವಾಂಖೆಡೆ ವಿರುದ್ಧ ವಿಚಾರಣೆಗೆ NCB ಆದೇಶ...

SHARE......LIKE......COMMENT......

ಮುಂಬೈ:
ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಮತ್ತು ಇತರರನ್ನು ಬಿಟ್ಟುಕಳಿಸುವುದಕ್ಕೆ 25 ಕೋಟಿ ರೂಪಾಯಿ ಲಂಚದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎನ್ ಸಿ ಬಿ ಮುಂಬೈ ನ ತನ್ನ ವಿಭಾಗೀಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ವಿಜಿಲೆನ್ಸ್ ತನಿಖೆಗೆ ಆದೇಶ ನೀಡಿದೆ.ಪ್ರಭಾಕರ್ ಸೈಲ್ ಎಂಬಾತ ಕ್ರೂಸ್ ಡ್ರಗ್ಸ್ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದು, ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಆರ್ಯನ್ ಖಾನ್ ನ್ನು ಈ ಪ್ರಕರಣದಿಂದ ಕೈಬಿಡಲು ಎನ್ ಸಿಬಿ ಅಧಿಕಾರಿ ಹಾಗೂ ಇತರರು 25 ಕೋಟಿ ರೂಪಾಯಿ ಕೇಳಿದ್ದರು ಎಂಬ ಗಂಭೀರ ಆರೋಪವನ್ನು ಅ.24 ರಂದು ಮಾಡಿದ್ದರು.