Breaking News

ರಾಜ್ಯಾದ್ಯಂತ ಅಬ್ಬರಿಸುತ್ತಿದೆ ಬಜರಂಗಿ ಅಭಿಯಾನ ..!

ಕಾಂಗ್ರೆಸ್​​ಗೆ ಠಕ್ಕರ್ ದೇಗುಲಗಳಲ್ಲಿ ಹನುಮಾನ್ ಚಾಲೀಸಾ..

SHARE......LIKE......COMMENT......

ಬೆಂಗಳೂರು:

ಬಜರಂಗದಳ ಬ್ಯಾನ್ ಮಾಡುವ ಕುರಿತ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ರಾಜ್ಯಾದ್ಯಂತ ಬಜರಂಗಿ ಅಭಿಯಾನ ನಡೆದಿದೆ. ಕಾಂಗ್ರೆಸ್​​ಗೆ ಠಕ್ಕರ್ ಕೊಡಲು ರಾಜ್ಯಾದ್ಯಂತ ಎಲ್ಲ ದೇಗುಲಗಳಲ್ಲಿ ಹನುಮಾನ್ ಚಾಲೀಸಾ ಪಠಣೆ ಅಭಿಯಾನ ನಡೆಸ್ಲಾಯ್ತು. ಬಿಜೆಪಿ ಸೇರಿ ಹಿಂದೂ ಸಂಘಟನೆಗಳಿಂದ ಅಭಿಯಾನಕ್ಕೆ ಸಾಥ್​​ ನೀಡಿದ್ದು, ಧರ್ಮ ರಕ್ಷಣೆಗೆ ಜೊತೆಯಾಗೋಣ ಎಂದು ಹನುಮಾನ್ ಚಾಲೀಸಾ ಪಠಣ ಮಾಡಿದ್ರು. ನಗರದ ಗಾಳಿ ಆಂಜನೇಯ ದೇಗುಲದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಹನುಮಾನ್ ಚಾಲೀಸಾ ಪಠಣ ನಡೀತು. ಬೆಂಗಳೂರು ಮಾತ್ರವಲ್ಲದೇ ಹಲವು ದೇಗುಲಗಳಲ್ಲಿ ಹನುಮಾನ್ ಚಾಲೀಸಾ ಪಠಣ ಅಭಿಯಾನ ನಡೆದಿದೆ.