Breaking News

ಕನ್ನಡ ಹಾಡು ಹಾಕಿದ್ದಕ್ಕೆ ಮದುವೆ ಮೆರವಣಿಗೆ ಮೇಲೆ ಎಂಇಎಸ್ ಪುಂಡರ ದಾಳಿ..!

ಕನ್ನಡ ಗೀತೆಗೆ ಕುಣಿಯುತ್ತಿದ್ದದನ್ನ ನೋಡಿ ಸಹಿಸಲಾಗದ ಎಂಇಎಸ್‌ ಗಲಾಟೆ....

SHARE......LIKE......COMMENT......

ಬೆಳಗಾವಿ:

ತಾಲ್ಲೂಕಿನ ಧಾಮಣೆ ಗ್ರಾಮದಲ್ಲಿ ಗುರುವಾರ ತಡರಾತ್ರಿ ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ಕಾರ್ಯಕರ್ತರು ಕನ್ನಡಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ವರ ಸಿದ್ದು ಸೈಬಣ್ಣವರ, ವಧು ರೇಷ್ಮಾ ಸೇರಿ ಐವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

‘ನಾವು ಮೆರವಣಿಗೆ ಮೂಲಕ ವಧು–ವರನನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದೆವು. ಕನ್ನಡ ಬಾವುಟ ಹಿಡಿದುಕೊಂಡು ಕನ್ನಡ ಗೀತೆಗೆ ಕುಣಿಯುತ್ತಿದ್ದೆವು. ಇದನ್ನು ನೋಡಿ ಸಹಿಸಲಾಗದ ಎಂಇಎಸ್‌ನವರು ಗಲಾಟೆ ಮಾಡಿದ್ದಾರೆ’ ಎಂದು ಗಾಯಗೊಂಡವರು ಆರೋಪಿಸಿದ್ದಾರೆ. ‘ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ಅವರು ಸ್ಪಂದಿಸುತ್ತಿಲ್ಲ’ ಎಂದು ಆರೋಪಿಸಿದರು. ‘ಮೆರವಣಿಗೆ ವೇಳೆ ಪಟಾಕಿಗಳನ್ನು ಸಿಡಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಎಂಇಎಸ್‌ನವರು ಹಲ್ಲೆ ನಡೆಸಿರುವ ಬಗ್ಗೆ ಯಾವುದೇ ದೂರು ಬಂದಿಲ್ಲ’ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದರು.

‘ಅಣ್ಣನ ಮದುವೆ ಮೆರವಣಿಗೆಯಲ್ಲಿ ಕನ್ನಡ ಧ್ವಜ ಹಿಡಿದು ಕುಣಿಯುತ್ತಿದ್ದೆವು. ಎಂಇಎಸ್‌ನವರು ನಮ್ಮನ್ನು ಪಕ್ಕಕ್ಕೆ ಕರೆದು ಗಲಾಟೆ ತೆಗೆದರು. ಬಡಿಗೆಯಲ್ಲಿ ಒಡೆದರು. ಎರಡು ತಿಂಗಳ ಹಿಂದೆ ನಮ್ಮ ಗಾಡಿಯನ್ನೂ ಸುಟ್ಟಿದ್ದರು. ಅಜಯ ಯಳ್ಳೂರಕರ, ಮಹೇಶ ಯಳ್ಳೂರಕರ, ಆಕಾಶ ಚೌಗುಲೆ ಅವರೆಲ್ಲರೂ ಸೇರಿ ನನ್ನ ಗಾಡಿ ಸುಟ್ಟಿದ್ದರು. ನಮ್ಮ ಮನೆ ಮುಂದೆ ಚನ್ನಮ್ಮನ ಫಲಕ ಹಾಕಿದ್ದೇವೆ. ಹೀಗಾಗಿ, ಪದೇ ಪದೇ ಗಲಾಟೆ ತೆಗೆಯುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ’ ಎಂದು ಚಿಕಿತ್ಸೆ ಪಡೆಯುತ್ತಿರುವ ಭರಮಾ ಸೈಬಣ್ಣವರ ಆರೋಪಿಸಿದ್ದಾರೆ…..