Breaking News

ಶಾಲೆ ಕುರಿತಂತೆ ಸಚಿವ ಸುರೇಶ್ ಕುಮಾರ್ ಸ್ಪಷ್ಟೀಕರಣ..!

ಜುಲೈನಲ್ಲಿ ಪ್ರಾರಂಭಿಸಲು ಹೊರಟ್ಟಿದ್ದ ಸರ್ಕಾರ ಇದೀಗ ಹಿಂದೆ ಸರಿದಿದೆ....

SHARE......LIKE......COMMENT......

ಬೆಂಗಳೂರು:

ಶಾಲಾ ಆರಂಭದ ಕುರಿತಂತೆ ಇದ್ದ ಗೊಂದಲಗಳಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಜುಲೈ 1ರಿಂದ ಯಾವ ಶಾಲೆಯನ್ನೂ ಪ್ರಾರಂಭಿಸುವ ಉದ್ದೇಶವನ್ನು ಹೊಂದಿಲ್ಲ. ಈ ಬಗ್ಗೆ ಯಾವುದೇ ಪೋಷಕರು ಅನವಶ್ಯಕವಾಗಿ ಗೊಂದಲಕ್ಕೆ ಒಳಗಾಗುವುದು ಬೇಡ. ರಾಜ್ಯದಲ್ಲಿ ಶಾಲಾರಂಭ ಕುರಿತಂತೆ ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಸಹ ಚರ್ಚಿಸಿ ಸಹಮತ ಪಡೆಯಲು ತೀರ್ಮಾನ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ಕೋವಿಡ್​-19 ಲಾಕ್​ಡೌನ್​ನಿಂದ ರಾಷ್ಟ್ರಾದ್ಯಂತ ಅನಿರ್ದಿಷ್ಟಾವಧಿವರೆಗೆ ಮುಚ್ಚಲ್ಪಟ್ಟಿರುವ ಶಾಲೆ-ಕಾಲೇಜುಗಳನ್ನು ಆಗಸ್ಟ್​ 15ರ ನಂತರದಲ್ಲಿ ಪುನರಾರಂಭಿಸುಲು ಕೇಂದ್ರ ಸರ್ಕಾರ ನಿರ್ಧಾರಿಸಿದೆ.

ಜುಲೈ ಮೊದಲ ವಾರದಲ್ಲಿ ಶಾಲೆ ಪ್ರಾರಂಭ ಮಾಡಲು ಸರ್ಕಾರ ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ದಿನಾಂಕ 05-06-2020ರಿಂದ ಶಾಲೆಗೆ ಹಾಜರಾಗಿ ಶಾಲೆ ಪುನರಾರಂಭದ ಕುರಿತು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಲಾಗಿತ್ತು. ಇದಕ್ಕೆ ಪೋಷಕರು ಸೇರಿದಂತೆ ಶಿಕ್ಷಣ ತಜ್ಞರು ಜುಲೈನಲ್ಲಿ ಶಾಲೆ ಪ್ರಾರಂಭಿಸುವುದು ಬೇಡ ಎಂದು ವಿರೋಧ ವ್ಯಕ್ತಪಡಿಸಿದ್ದರು. ಒಟ್ಟಿನಲ್ಲಿ ಕೋವಿಡ್​-19 ಲಾಕ್​ಡೌನ್​ನಿಂದ ರಾಷ್ಟ್ರಾದ್ಯಂತ ಅನಿರ್ದಿಷ್ಟಾವಧಿವರೆಗೆ ಮುಚ್ಚಲ್ಪಟ್ಟಿರುವ ಶಾಲೆ-ಕಾಲೇಜುಗಳನ್ನು ಜುಲೈನಲ್ಲಿ ಪ್ರಾರಂಭಿಸಲು ಹೊರಟ್ಟಿದ್ದ ರಾಜ್ಯ ಸರ್ಕಾರ ಇದೀಗ ಹಿಂದೆ ಸರಿದಿದೆ……