ಬೆಂಗಳೂರು:
ದೀಪಾವಳಿ ಹಬ್ಬದಂದು ದೇವಾಲಯಗಳಲ್ಲಿ ಗೋಪೂಜೆ ಮಾಡಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ನವೆಂಬರ್ 5ರ ಬಲಿಪಾಡ್ಯಮಿಯಂದು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಗೋಮಾತೆಯನ್ನ ಪೂಜಿಸಿ ಆರಾಧಿಸಲು ಆದೇಶ ಕೊಡಲಾಗಿದೆ. ಬಲಿಪಾಡ್ಯಮಿ ದಿನ ಸಂಜೆ 5.30ರಿಂದ 6.30ರ ಸಮಯಕ್ಕೆ ದೇವಾಲಯಗಳಲ್ಲಿ ಗೋವುಗಳನ್ನು ಸ್ನಾನ ಮಾಡಿಸಿ, ಅರಿಶಿಣ, ಕುಂಕುಮ ಹಚ್ಚಿ, ಹೂವುಗಳಿಂದ ಅಲಂಕರಿಸಿ, ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸಿಗಳನ್ನ ಹಸುಗಳಿಗೆ ನೀಡಿ ಆರಾಧಿಸಲು ಸೂಚನೆ ನೀಡಲಾಗಿದೆ……