Breaking News

ಅಣ್ಣ ಸತ್ಯನಾರಾಯಣ ಅವರ ಆಶೀರ್ವಾದ ಪಡೆಯುತ್ತಿರುವ ರಜನಿಕಾಂತ್..!

ಡಿಸೆಂಬರ್ 31ರಂದು ಪಕ್ಷ ಸ್ಥಾಪನೆ....

SHARE......LIKE......COMMENT......

ಬೆಂಗಳೂರು:

ಹೊಸ ಪಕ್ಷದ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡುವುದಾಗಿ ಈಚೆಗೆ ಘೋಷಿಸಿದ್ದ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್, ಭಾನುವಾರ ರಾತ್ರಿ ಬೆಂಗಳೂರಿಗೆ ಭೇಟಿ ನೀಡಿ ಅಣ್ಣ ಸತ್ಯನಾರಾಯಣ ಅವರ ಆಶೀರ್ವಾದ ಪಡೆದಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಡಿಸೆಂಬರ್ 3 ರಂದು ಬೆಂಬಲಿಗರ ಸಭೆ ನಡೆಸಿದ್ದ ರಜಿನಿಕಾಂತ್, 2021ರ ಜನವರಿಯಲ್ಲಿ ಹೊಸ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದರು. 2021ರ ಏಪ್ರಿಲ್–ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಜನಬೆಂಬಲದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದರು. ಡಿಸೆಂಬರ್ 31ರಂದು ಪಕ್ಷ ಸ್ಥಾಪನೆ ಕುರಿತ ವಿಷಯಗಳ ಬಗ್ಗೆ ಪ್ರಕಟಿಸುವುದಾಗಿ ರಜನಿಕಾಂತ್ ಟ್ವೀಟ್ ಮಾಡಿದ್ದರು……