ಟಾಲಿವುಡ್.
ಆರ್ಜಿವಿ ಟ್ವಿಟರ್ನಲ್ಲಿ ಏನಾದರೊಂದು ಟ್ವೀಟ್ ಮಾಡಿ ವಿವಾದಗಳನ್ನು ಸೃಷ್ಟಿ ಮಾಡುತ್ತಲೇ ಇರುತ್ತಾರೆ. ಈಗ ಮತ್ತೊಂದು ಅತೀ ದೊಡ್ಡ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.
ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಗ್ಗೆ ಅವಹೇಳನಕಾರಿಯಾಗಿ ಟ್ವಿಟ್ ಮಾಡಿದ್ದರು ,ಇದೇ ಹೇಳಿಕೆ ಈಗ ಟಾಲಿವುಡ್ ನಿರ್ದೇಶಕನಿಗೆ ತೊಂದರೆಯಾಗಿದೆ . ರಾಮ್ ಗೋಪಾಲ್ ವರ್ಮಾ ಟ್ವೀಟ್ ಹೇಳಿಕೆ ವಿರೋಧಿಸಿ ದೂರುಗಳ ಮೇಲೆ ದೂರು ದಾಖಲಾಗಿದೆ.
ಈ ಬಾರಿ ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಗ್ಗೆ ಎರಡು ದಿನಗಳ ಹಿಂದೆ ಆರ್ಜಿವಿ ಟ್ವಿಟರ್ನಲ್ಲಿ ವ್ಯಂಗ್ಯವಾಗಿ ಕಮೆಂಟ್ ಮಾಡಿದ್ದರು.” ದ್ರೌಪದಿ ರಾಷ್ಟ್ರಪತಿಯಾದ್ರೆ, ಪಾಂಡವರು ಯಾರು? ಎಲ್ಲಕ್ಕಿಂತ ಮುಖ್ಯವಾಗಿ ಕೌರವರು ಯಾರು?” ಎಂದು ಕಮೆಂಟ್ ಮಾಡಿದ್ದರು.
If DRAUPADI is the PRESIDENT who are the PANDAVAS ? And more importantly, who are the KAURAVAS?
— Ram Gopal Varma (@RGVzoomin) June 22, 2022
ಆರ್ಜಿವಿ ಕೊಟ್ಟ ಈ ಹೇಳಿಕೆ ಬಿಜೆಪಿಯ ಕೆಲವು ಮುಖಂಡರನ್ನು ಕೆರಳಿಸಿದೆ. ದ್ರೌಪದಿ ಮುರ್ಮು ಅವರನ್ನು ಅವಮಾನಿಸಿದ್ದಕ್ಕೆ ಕೆಲವು ನಾಯಕರು ಹಾಗೂ ಮಹಿಳಾ ಸಮುದಾಯಗಳು ವಿರೋಧ ವ್ಯಕ್ತಪಡಿಸಿದ್ದು, ದೂರು ದಾಖಲಿಸಿವೆ. ಬಿಜೆಪಿ ಮುಖಂಡರಾದ ರಾಜಾ ಸಿಂಗ್ ಹಾಗೂ ರಾಕೇಶ್ ರೆಡ್ಡಿ ಆರ್ಜಿವಿ ಅವರನ್ನು ಜೈಲಿಗೆ ಕಳುಹಿಸಬೇಕು. ಅವರಿಗೆ ಬಿಜೆಪಿ ಪವರ್ ತೋರಿಸುತ್ತೇವೆ.” ಎಂದು ಹೇಳಿದ್ದಾರೆ.
ವಿವಾದ ಭುಗಿಲೆದ್ದ ಬಳಿಕ ಆರ್ಜಿವಿ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದರು. ” ಈ ಹೇಳಿಕೆಯನ್ನು ಕೇವಲ ವ್ಯಂಗ್ಯವಾಗಿ ಹೇಳಲಾಗಿದೆ. ಇದರಲ್ಲಿ ಬೇರೆ ಯಾವುದೇ ರೀತಿಯ ಉದ್ದೇಶವಿಲ್ಲ. ದ್ರೌಪದಿ ಮಹಾಭಾರತದಲ್ಲಿ ನನ್ನ ಅಚ್ಚುಮೆಚ್ಚಿನ ಪಾತ್ರ. ಈ ಹೆಸರು ಅಪರೂಪವಾಗಿದ್ದರಿಂದ ನನ್ನ ಭಾವನೆಗಳನ್ನು ವ್ಯಕ್ತಪಡಿಸಲು ಆ ಹೆಸರಿಗೆ ಸಂಬಂಧಿಸಿದ ಪಾತ್ರಗಳನ್ನು ನೆನಪಿಸಿಕೊಂಡೆ. ಯಾರ ಭಾವನೆಗಳಿಗೂ ಧಕ್ಕೆ ತರುವ ಉದ್ದೇಶವಿಲ್ಲ.” ಎಂದು ಆರ್ಜಿವಿ ಟ್ವೀಟ್ ಮಾಡಿದ್ದಾರೆ.
This was said just in an earnest irony and not intended in any other way ..Draupadi in Mahabharata is my faviourate character but Since the name is such a rarity I just remembered the associated characters and hence my expression. Not at all intended to hurt sentiments of anyone https://t.co/q9EZ5TcIIV
— Ram Gopal Varma (@RGVzoomin) June 24, 2022
ಆರ್ಜಿವಿ ಕ್ಲಾರಿಫಿಕೇಷನ್ ಕೊಟ್ಟರೂ, ಬಿಜೆಪಿ ಮುಖಂಡರು ಎಸ್ಸಿ/ಎಸ್ಟಿ ದೌರ್ಜನ್ಯ ಪ್ರಕರಣಗಳ ಆಧಾರದ ಮೇಲೆ ದೂರನ್ನು ದಾಖಲಿಸಲು ತೀರ್ಮಾನಿಸಿದ್ದಾರೆ. ಅಲ್ಲದೆ ಆರ್ಜಿವಿ ವಿರುದ್ಧ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಲಿದೆ ಎಂದು ವರದಿಯಾಗಿದೆ….