ಬೆಂಗಳೂರು:
ಶಾಲಾ-ಕಾಲೇಜು ಆರಂಭದ ಬೆನ್ನಲ್ಲೇ ಅಗ್ನಿಪರೀಕ್ಷೆ ಶುರುವಾಗಿದೆ.ಇಂದು ಎಸ್ಎಸ್ಎಲ್ಸಿ, ಪಿಯುಸಿ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಲಿದೆ. ಮೇ 2ನೇ ವಾರದಲ್ಲಿ ದ್ವಿತೀಯ ಪಿಯುಸಿಗೆ ಪರೀಕ್ಷೆ ಹಾಗೂ ಎಸ್ಎಸ್ಎಲ್ಸಿಗೆ ಜೂನ್ ಮೊದಲ ವಾರದಲ್ಲಿ ಎಕ್ಸಾಂ ನಡೆಸಲು ಇಲಾಖೆ ಸಜ್ಜಾಗಿದೆ. ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಹಾಗೂ ಸಿಲಬಸ್ ಕೂಡಾ ಇಂದು ಪ್ರಕಟ ಆಗಲಿದೆ. ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಕುರಿತು ಶಿಕ್ಷಣ ಇಲಾಖೆ ಮಾಹಿತಿ ಕೊಟ್ಟಿದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ. ಕೊರೋನಾ ಆತಂಕದಲ್ಲಿಯೇ ಕಳೆದ ಒಂದು ವರ್ಷದ ಬಳಿಕ ಶಾಲೆ, ಕಾಲೇಜುಗಳು ಆರಂಭವಾಗಿದೆ. 2020-21ರ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ……