Breaking News

ಲಾಕ್‌ಡೌನ್ ಭೀತಿಯಿಂದ ಊರಿನತ್ತ ವಲಸೆ ಕಾರ್ಮಿಕರು..!

ಎಪ್ರಿಲ್ 8 ರಂದು ಕೊರೋನಾ ಸಭೆ ಕರೆದ ಪ್ರಧಾನಿ....

SHARE......LIKE......COMMENT......

ಮುಂಬೈ:

ಕಳೆದ ವರ್ಷ ಕೊರೋನಾ ವಕ್ಕರಿಸಿದಾಗ ಭಾರತದಲ್ಲಿ ಲಾಕ್‌ಡೌನ್ ಹೇರಲಾಗಿತ್ತು. ಬಳಿಕ ವಲಸೆ ಕಾರ್ಮಿಕರು ಪಟ್ಟ ಪಾಡು ಹೇಳತೀರದು. ಇದೀಗ ಮತ್ತೆ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ವೀಕೆಂಡ್ ಲಾಕ್‌ಡೌನ್, ನೈಟ್ ಕರ್ಫ್ಯೂ ಹೇರಲಾಗಿದೆ. ಇದೀಗ ಮತ್ತಷ್ಟು ನಿರ್ಬಂಧ ಹೇರುತ್ತಿರುವ ಕಾರಣ ವಲಸೆ ಕಾರ್ಮಿಕರು ಊರಿನತ್ತ ತೆರಳುತ್ತಿದ್ದಾರೆ.

ದೇಶದಲ್ಲಿ ದಿನವೊಂದಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ 1 ಲಕ್ಷ ದಾಟಿದೆ. ಪ್ರಧಾನಿ ನರೇಂದ್ರ ಮೋದಿ ಎಪ್ರಿಲ್ 8 ರಂದು ಎಲ್ಲಾ ಮುಖ್ಯಮಂತ್ರಿಗಳ ಜೊತೆ ಕೊರೋನಾ ಸಭೆ ಕರೆದಿದ್ದಾರೆ. ಇದು ಜನರ ಆತಂಕವನ್ನು ಹೆಚ್ಚಿಸಿದೆ. ಕಳೆದ ಮಾರ್ಚ್-ಎಪ್ರಿಲ್‌ನಲ್ಲಿದ್ದ ಪರಿಸ್ಥಿತಿ ಇದೀಗ ಮತ್ತೆ ಎದುರಾಗಿದೆ. ಕೊರೋನಾ ಪ್ರಕರಣ ಸಂಖ್ಯೆ ಹಿಂದಿಗಿಂತಲೂ ದುಪ್ಪಟ್ಟಾಗಿದೆ. ಹೀಗಾಗಿ ವಲಸೆ ಕಾರ್ಮಿಕರು ಲಾಕ್‌ಡೌನ್ ಆತಂಕದಿಂದ ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ.

ಮಹಾರಾಷ್ಟ್ರರದಲ್ಲಿ ವೀಕೆಂಡ್ ಲಾಕ್‌ಡೌನ್ ಹಾಗೂ ಪ್ರತಿ ದಿನ ನೈಟ್ ಕರ್ಫ್ಯೂ ಘೋಷಿಸಲಾಗಿದೆ. ಈ ನಿರ್ಧಾರ ಬೆನ್ನಲ್ಲೇ ಮುಂಬೈನಲ್ಲಿರುವ ವಲಸೆ ಕಾರ್ಮಿಕರು ಮತ್ತೆ ತಮ್ಮ ತಮ್ಮ ಊರಿನತ್ತ ತೆರಳು ರೈಲು ನಿಲ್ದಾಣಕ್ಕೆ ಧಾವಿಸುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಮಹಾರಾಷ್ಟ್ರದಲ್ಲಿ ರೈಲು ಸೇವೆ ಸ್ಥಗಿತಗೊಳಿಸುವ ಕುರಿತು ಚರ್ಚೆ ನಡೆಯುತ್ತಿದೆ. ಅತೀ ಹೆಚ್ಚು ಮಂದಿ ಆಶ್ರಯಿಸಿರುವ ರೈಲು ಸೇವೆಯಿಂದ ಕೊರೋನಾ ಹರಡುವಿಕೆ ಹೆಚ್ಚು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ವಲಸೆ ಕಾರ್ಮಿಕರು ಮತ್ತಷ್ಟು ಭೀತಿಗೊಂಡಿದ್ದಾರೆ. ರೈಲು ಸೇವೆ ಸ್ಥಗಿತಗೊಳ್ಳುವ ಮೊದಲು ಊರು ಸೇರಲು ವಲಸೆ ಕಾರ್ಮಿಕರು ಚಡಪಡಿಸುತ್ತಿದ್ದಾರೆ……